BREAKING : ಬಜೆಟ್ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿ ಬಂದ ಬಿಜೆಪಿ ನಾಯಕರು ; ಮೊಳಗಿದ ‘ಜೈ ಶ್ರೀರಾಮ್’ ಘೋಷಣೆ

ಬೆಂಗಳೂರು : ರಾಜ್ಯಪಾಲರ ಭಾಷಣದ ಮೂಲಕ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರು ಆಗಮಿಸಿದ್ದಾರೆ.

ಕೆಲವರು ಕೇಸರಿ ಶಾಲು ಧರಿಸಿ ಬಂದಿದ್ದರು, ಕೆಲವರು ಧರಿಸಿರಲಿಲ್ಲ,ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ನಾಯಕ ಮುನಿರತ್ನ ಉಳಿದವರಿಗೆ ಕೇಸರಿ ಶಾಲು ನೀಡಿದರು. ಈ ವೇಳೆ ಸದನದಲ್ಲಿ ಬಿಜೆಪಿ ನಾಯಕರು ಜೈ ಶ್ರೀರಾಮ್ ಘೋಷಣೆ   ಮೊಳಗಿಸಿದರು.

 ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ಇಂದಿನಿಂದ ಫೆ.23ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂಡ್ ಗೆಹ್ಲೋಟ್, ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read