ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು, ಸಾಕಿ, ತಿದ್ದಿ ಬೆಳೆಸಿದ ನನ್ನಮ್ಮ ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟುಬಿಟ್ಟರು ಎಂದು ತಿಳಿಸಿದ್ದಾರೆ.
ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿಯ ನಂತರ ಬೆಂಗಳೂರಿನ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ 8 ಬಾರಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಅವರ ನಿಧನಕ್ಕೆ ಬಿಜೆಪಿ ನಾಯಕರು, ಮುಖಂಡರು ಸಂತಾಪ ಸೂಚಿಸಿದ್ದಾರೆ.
ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ #ನನ್ನಮ್ಮ, ಎಲ್ಲರ #ಸುಶೀಲಮ್ಮ_ಟೀಚರ್…ಇನ್ನಿಲ್ಲ.
— S.Suresh Kumar (@nimmasuresh) September 23, 2025
ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು. pic.twitter.com/BN9rQqvUxa