ಬೆಂಗಳೂರು: ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕೇಸು ಸ್ವೀಕರಿಸುವ ಮೊದಲು ಸಿದ್ದರಾಮಯ್ಯ ವಾದ ಆಲಿಸಲು ಅವಕಾಶ ಕಲ್ಪಿಸಿದೆ.
ಬಿಎನ್ಎಸ್ಎಸ್ ಸೆಕ್ಷನ್ 253ರ ಅಡಿ ನ್ಯಾಯಾಲಯ ನೋಟಿಸ್ ನೀಡಿದೆ. ಅತಿ ಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್.ಎಸ್.ಎಸ್., ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಹೇಳಿಕೆ ನೀಡಿದ್ದರು. ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಕೇಸು ದಾಖಲಿಸಿದ್ದರು. ಜೂನ್ 26 ರ ಒಳಗೆ ಸಿಎಂ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.