BREAKING : ಭ್ರಷ್ಟಾಚಾರ ಆರೋಪ : ಸಚಿವೆ ‘ಲಕ್ಷ್ಮೀ ಹೆಬ್ಬಾಳ್ಕರ್’ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.

ಹೌದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. 600 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ವಕೀಲ ನಟರಾಜ್ ಶರ್ಮಾ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಕಪ್ಪುಪಟ್ಟಿಯಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಂ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಿರುವ ನಟರಾಜ ಶರ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರ. ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಗುತ್ತಿಗೆದಾರರಿಂದ ಅಂಗನವಾಡಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಇರುವುದಿಲ್ಲ, ಆದ್ದರಿಂದ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು, ಆದರೆ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. 600 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಈಗಾಗಲೇ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡುತ್ತಿರುವ ವಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read