SHOCKING : ಪಟಾಕಿ ಸಿಡಿಸುವಾಗ ಹುಚ್ಚಾಟ : ಬೆಂಗಳೂರಿನಲ್ಲಿ ಯುವಕ ದಾರುಣ ಸಾವು |VIDEO VIRAL

ದೀಪಾವಳಿ ಹಬ್ಬದಲ್ಲಿ ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಯುವಕ ಮೃತಪಟ್ಟ ಘಟನೆ ನಡೆದಿದೆ. ಸ್ನೇಹಿತರ ಚಾಲೆಂಜ್ ಸ್ವೀಕರಿಸಿದ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್  ಆಗಿದೆ.

ದೀಪಾವಳಿ ಹಬ್ಬದಂದು ಸ್ನೇಹಿತರ ಜೊತೆ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ.. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬಲಿಯಾಗಿದ್ದಾನೆ.

ಹಬ್ಬದ ದಿನ ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಶಬರೀಶ್ ಸ್ನೇಹಿತರು ಡಬ್ಬಿಗೆ ಪಟಾಕಿ ಅಂಟಿಸಿ ಕೂರಲು ಚಾಲೆಂಜ್ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ಈ ಚಾಲೆಂಜ್ ಸ್ವೀಕರಿಸಿದ ಯುವಕ ಡಬ್ಬಿ ಮೇಲೆ ಕೂತಿದ್ದಾನೆ ಹಾಗೂ ಪಟಾಕಿ ಸಿಡಿತದಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ಶಬರೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಮಂದಿಯನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read