BREAKING : ಲಾಂಗು ಮಚ್ಚುಗಳಿಂದ ಯುವಕನ ಮೇಲೆ ‘ಡೆಡ್ಲಿ ಅಟ್ಯಾಕ್’ : ಬೆಚ್ಚಿ ಬಿದ್ದ ಬೆಂಗಳೂರು.!

ಬೆಂಗಳೂರು : ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಯುವಕನ ಮೇಲೆ ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಕಾಸ್ತ್ರಗಳ ಜೊತೆ ಬಂದ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಯುವಕ ಅರುಣ್ ಎಂಬಾತನ ಮೇಲೆ ಮನಬಂದಂತೆ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ. ಅರುಣ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾನೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಯ್ಸಳ ಪೊಲೀಸರು ಧಾವಿಸಿದ್ದಾರೆ. ಅರುಣ್ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಪೊಲೀಸರು ಸಹಾಯ ಮಾಡಲಿಲ್ಲ ಸುಮ್ಮನೆ ನಿಂತಿದ್ದರು ಎಂದು ಜನರು ಆರೋಪಿಸಿದ್ದಾರೆ. ಬಳಿಕ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯಂತೆ.

ನಿನ್ನೆ ಸಂಜೆ ಹೆಗ್ಗನಹಳ್ಳಿ ಕಡೆ ಹೋಗಿ ಕೆಲ ಯುವಕರ ಜೊತೆ ಅರುಣ್ ಗಲಾಟೆ ಮಾಡಿಕೊಂಡು ಬಂದಿದ್ದಾನೆ. ನಂತರ ಅವರು ಫಾಲೋ ಮಾಡಿಕೊಂಡು ಬಂದಿದ್ದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read