BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ವೃದ್ಧೆ ಬಲಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ವೃದ್ದೆಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಮುಂದೆ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ವೃದ್ಧೆಯನ್ನು ತಾರಮತಿ (75) ಎಂದು ಗುರುತಿಸಲಾಗಿದೆ.

ಮಳೆಯಿಂದಾಗಿ ವೃದ್ದೆಯ ಮನೆ ಮುಂದಿನ ಅಂಗಳ ಜಲಾವೃತಗೊಂಡಿತ್ತು. ಈ ವೇಳೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ವೃದ್ಧೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಇಂದು ಮತ್ತು ನಾಳೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read