ಚಿಕ್ಕಮಗಳೂರು: ಕಾಮಗಾರಿ ವೇಳೆ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ.
ಮೊಹಮ್ಮದ್ ಇಸ್ಮಾಯಿಲ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಮಗಾರಿ ಕೈಗೊಂಡಿದ್ದರು. ಕಾಮಗಾರಿ ವೇಳೆಯಲ್ಲೇ ಸಿಡಿಲು ಪಡೆದು ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.