BREAKING: ಹುಬ್ಬಳ್ಳಿ ನಗರದಲ್ಲಿ ಇಬ್ಬರು ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಹುಬ್ಬಳ್ಳಿ: ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬಾಲರಾಜ್ ಮತ್ತು ಮೊಹಮ್ಮದ್ ಶೇಖ್ ಅವರ ಕಾಲಿಗೆ ಗುಂಡೇಟು ತಗುಲಿದೆ.

ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಘಟನೆ ನಡೆದಿದೆ. ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಫೈರಿಂಗ್ ಮಾಡಿದ್ದಾರೆ. ಮಲ್ಲಿಕ್ ಜಾನ್ ಕೊಲೆ ಪ್ರಕರಣದ ಆರೋಪಿಗಳಾಗಿರುವ ಬಾಲರಾಜ್ ಮತ್ತು ಮಹಮ್ಮದ್ ಶೇಖ್ ಅವರು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವೇಳೆ ಫೈರಿಂಗ್ ಮಾಡಲಾಗಿದೆ.

ಆರೋಪಿಗಳು ಶ್ಯಾಮ್ ಜಾಧವ್ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳಾದ ಪಿಐ ಎಸ್.ಆರ್. ನಾಯಕ್, ಪಿಸಿಗಳಾದ ಅಹಮದ್ ನೀಲಗಾರ, ಚಲವಾದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರು ಮತ್ತು ಆರೋಪಿಗಳು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read