ನವದೆಹಲಿ: ಕರ್ನಾಟಕ ರಾಜ್ಯದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರಕ್ಕೆ ಕೇಂದ್ರ ಕೃಷಿ ಸಚಿವರು ಸ್ಪಂದಿಸಿದ್ದಾರೆ.
2025 -26ನೇ ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರತಿ ಕ್ವಿಂಟಲ್ ಮಾವಿಗೆ 1616 ರೂಪಾಯಿ ಪರಿಹಾರ ಘೋಷಿಸಲಾಗಿದೆ.
ರಾಜ್ಯದ 2,50,000 ಮೆಟ್ರಿಕ್ ಟನ್ ಮಾವಿಗೆ ಪರಿಹಾರ ಧನ ನೀಡಲಾಗುವುದು. ಎಂಐಎಸ್ ಯೋಜನೆಯಡಿ ಪರಿಹಾರ ನೀಡಲು ಅನುಮೋದನೆ ನೀಡಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.
ರಾಜ್ಯದ ಮಾವು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವಂತೆ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದರು.
“ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರ್ಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ(Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ.” ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು🙏
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2025
ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention… pic.twitter.com/Ox3coq57qr