ಬೆಂಗಳೂರು: ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಲಾಲ್ ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆಪಿ ನಗರ, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ.
ಕೆಆರ್ ಮಾರುಕಟ್ಟೆಯಲ್ಲಿ ಮಳೆಯಿಂದ ಅವ್ಯವಸ್ಥೆ ಉಂಟಾಗಿದೆ. ರಸ್ತೆಯೆಲ್ಲಾ ಕೆಸರು ಗದ್ದೆಯಂತಾಗಿದೆ. ಸಾರ್ವಜನಿಕರು ವಾಹನ ಸವರ ಓಡಾಟಕ್ಕೆ ತೊಂದರೆಯಾಗಿದೆ. ಮಾರುಕಟ್ಟೆಗೆ ಬಂದಿದ್ದವರು ತೊಂದರೆ ಅನುಭವಿಸಿದ್ದಾರೆ.
ಹಲವೆಡೆ ರಸ್ತೆಗಳು, ಅಂಡರ್ ಪಾಸ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆಯಾಗಿದೆ.