BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ನಡುರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ .!

ಚಿತ್ರದುರ್ಗ : ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.

55 ವರ್ಷದ ಗೋಪಿನಾಥ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಹಾಗೂ ಪೊಲೀಸರು ಗೋಣಿ ಚೀಲ ಹಾಕಿ ಬೆಂಕಿ ನಂದಿಸಿದ್ದಾರೆ. ಗಾಯಾಳುವನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈತ ಮಾನಸಿಕ ಅಸ್ವಸ್ಥನೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಪೆಟ್ರೋಲ್ ಸುರಿದುಕೊಂಡು ಗೋಪಿನಾಥ್ ಬೆಂಕಿ ಹಚ್ಚಿಕೊಂಡಿದ್ದಾರೆ. ಗೋಪಿನಾಥ್ ದೇಹ ಶೇ.50 ರಷ್ಟು ಸುಟ್ಟಿದ್ದು, ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಈತನ ಪ್ರಾಣ ಉಳಿದಿದೆ.ಸ್ಥಳೀಯರ ಮೊಬೈಲ್ ನಲ್ಲಿ ಭೀಕರ ದೃಶ್ಯ ಸೆರೆಯಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read