BREAKING : ತುಮಕೂರಿನಲ್ಲಿ ಘೋರ ಘಟನೆ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಪಾಪಿ ಸೊಸೆ..!

ತುಮಕೂರು : ಪಾಪಿ ಸೊಸೆಯೋರ್ವಳು ಅತ್ತೆ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯದಲ್ಲಿ ನಡೆದಿದೆ. ಅತ್ತೆ-ಸೊಸೆ ಜಗಳ ನೀವು ನೋಡಿರಬಹುದು, ಕೇಳಿರಬಹುದು. ಆದರೆ ಅತ್ತೆ-ಸೊಸೆ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತರನ್ನು ಅತ್ತೆ ಕೆಂಪಮ್ಮ ಎಂದು ಗುರುತಿಸಲಾಗಿದೆ. ಸೊಸೆ ಉಮಾದೇವಿ ಈ ಕೃತ್ಯ ಎಸಗಿದ್ದಾರೆ.
ಕ್ಷುಲ್ಲಕ ಕಾರಣಕ್ಕ ಅತ್ತೆ ಸೊಸೆ ನಡುವೆ ಜಗಳ ನಡೆದಿದ್ದು, ನಂತರ ಜಗಳ ತಾರಕಕ್ಕೇರಿದೆ. ಪರಿಣಾಮ ಸೊಸೆ ಅತ್ತೆ ಮೇಲೆ ಹಲ್ಲೆ ನಡೆದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಕೆಂಪಮ್ಮಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read