BREAKING : ಮಾಜಿ ಸಚಿವ ಬಿ.ನಾಗೇಂದ್ರಗೆ ಹೈಕೋರ್ಟ್ ನೋಟಿಸ್, ನ.15 ಕ್ಕೆ ವಿಚಾರಣೆ ಮುಂದೂಡಿಕೆ |B.Nagendra

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ.

ಈ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನಾಗೇಂದ್ರ ಅವರಿಗೆ ನೋಟಿಸ್ ನೀಡಿದ್ದು, ಪ್ರಕರಣದ ಅರ್ಜಿ ವಿಚಾರಣೆಯನ್ನು ನ.15 ಕ್ಕೆ ಮುಂದೂಡಿದೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಜುಲೈ 12ರಂದು ಇಡಿ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ಲಕ್ಷ ಬಾಂಡ್ , ಇಬ್ಬರ ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಸೇರಿದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read