BREAKING : ಹಿಂದೂ ಸಂತ ‘ಚಿನ್ಮಯ್ ದಾಸ್’ ಜಾಮೀನು ಅರ್ಜಿ ತಿರಸ್ಕಾರ, ‘ಬಾಂಗ್ಲಾ’ ಕೋರ್ಟ್ ಆದೇಶ.!

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 25 ರಂದು ಢಾಕಾ ಪೊಲೀಸರು ಬಂಧಿಸಿದ ಜೈಲಿನಲ್ಲಿರುವ ಹಿಂದೂ ಸಂತ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯನ್ನು ಬಾಂಗ್ಲಾದೇಶದ ಚಟ್ಟೋಗ್ರಾಮ್ನ ನ್ಯಾಯಾಲಯ ಗುರುವಾರ (ಜನವರಿ 2) ತಿರಸ್ಕರಿಸಿದೆ.

ಢಾಕಾದಿಂದ ಚಟ್ಟೋಗ್ರಾಮ್ಗೆ ಪ್ರಯಾಣಿಸಿದ 11 ಸುಪ್ರೀಂಕೋರ್ಟ್ ವಕೀಲರ ತಂಡವು ಕೋರಿದ್ದ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಮೊಹಮ್ಮದ್ ಸೈಫುಲ್ ಇಸ್ಲಾಂ ಅವರು ಸುಮಾರು 30 ನಿಮಿಷಗಳ ಕಾಲ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ತಿರಸ್ಕರಿಸಿದ್ದಾರೆ ಎಂದು ಢಾಕಾ ಮೂಲದ ದಿ ಡೈಲಿ ಸ್ಟಾರ್ ವರದಿ ಮಾಡಿದೆ.

ಚಿನ್ಮಯ್ ಭಾಗವಾಗಿರುವ ಸಮ್ಮಿಲಿತಾ ಸನಾತನ ಜಾಗರಣ್ ಜೋಟೆ ಸಂಘಟನೆಯ ವಕ್ತಾರರೂ ಆಗಿರುವ ಹಿರಿಯ ವಕೀಲ ಅಪೂರ್ವ ಕುಮಾರ್ ಭಟ್ಟಾಚಾರ್ಜಿ ಅವರು 11 ವಕೀಲರ ತಂಡದ ನೇತೃತ್ವ ವಹಿಸಿದ್ದರು. ಚಿನ್ಮಯ್ ಅವರ ವಕೀಲ ಭಟ್ಟಾಚಾರ್ಜಿ ಅವರು ಜಾಮೀನಿಗಾಗಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಯೋಜಿಸಿದ್ದಾರೆ ಎಂದು ಡೈಲಿ ಸ್ಟಾರ್ಗೆ ತಿಳಿಸಿದರು.ನಾವು ನಮ್ಮ ವಾದಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದೇವೆ. ಜಾಮೀನನ್ನು ಪ್ರಾಸಿಕ್ಯೂಷನ್ ವಿರೋಧಿಸಿತು. ನ್ಯಾಯಾಲಯ ಅದನ್ನು ತಿರಸ್ಕರಿಸಿತು. ಉನ್ನತ ನ್ಯಾಯಾಲಯಕ್ಕೆ ಹೋಗುವ ಮೂಲಕ ನಾವು ಮುಂದಿನ ಹೆಜ್ಜೆ ಇಡುತ್ತೇವೆ” ಎಂದು ಬಾಂಗ್ಲಾದೇಶದ ಮಾಜಿ ಉಪ ಅಟಾರ್ನಿ ಜನರಲ್ ಅಪೂರ್ವ ಕುಮಾರ್ ಭಟ್ಟಾಚಾರ್ಯ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read