BREAKING : ರಾಜ್ಯದಲ್ಲಿ ‘HMPV’ ವೈರಸ್ ಪತ್ತೆ : ಇಂದು ಸಂಜೆ 4 ಗಂಟೆಗೆ ‘ಆರೋಗ್ಯ ಇಲಾಖೆ’ ಸಭೆ ಕರೆದ CM ಸಿದ್ದರಾಮಯ್ಯ.!

ಬೆಂಗಳೂರು : ರಾಜ್ಯದಲ್ಲಿ HMPV ಕೇಸ್ ಪತ್ತೆಯಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಸಭೆ ಕರೆದಿದ್ದಾರೆ.

ಇಂದು ಸಂಜೆ 4 ಗಂಟೆಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಸಭೆ ಕರೆದಿದ್ದಾರೆ. ನಿನ್ನೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದರು.

ಚೀನಾದಲ್ಲಿ ಹರಡಿದೆ ಎನ್ನಲಾಗಿರುವ HMPV ವೈರಸ್ ಈಗ ಭಾರತದಲ್ಲಿ ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಾಣಿಸಿಕೊಂಡಿದೆ. ಹೀಗಾಗಿ ಸಹಜವಾಗಿಯೇ ಕೆಲವರಲ್ಲಿ ಆತಂಕ ಉಂಟಾಗಿದೆ.

HMPV ವೈರಸ್ ಎಂದರೇನು ?

HMPV ಅಂದರೆ ಹ್ಯೂಮನ್ ಮೆಟಾಪ್ನ್ಯೂಮೋವೈರಸ್. ಇದು ಉಸಿರಾಟದ ವ್ಯವಸ್ಥೆಯನ್ನು ಹಾನಿಗೊಳಿಸುವ ಒಂದು ರೀತಿಯ ವೈರಸ್. ಇದು ಸಾಮಾನ್ಯವಾಗಿ ಶೀತದಂತಹ ಲಕ್ಷಣಗಳನ್ನು ಉಂಟುಮಾಡುತ್ತದೆ.

ಮುನ್ನೆಚ್ಚರಿಕಾ ಕ್ರಮಗಳು
* ಕೈಗಳನ್ನು ಆಗಾಗ್ಗೆ ತೊಳೆಯುವುದು: ಸೋಪು ಮತ್ತು ನೀರಿನಿಂದ ಕೈಗಳನ್ನು ಆಗಾಗ್ಗೆ ತೊಳೆಯುವುದು ವೈರಸ್ ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ.
* ಮುಖವನ್ನು ಮುಚ್ಚಿಕೊಳ್ಳುವುದು: ಕೆಮ್ಮುವಾಗ ಅಥವಾ ಸೀನುವಾಗ ಮುಖವನ್ನು ಟಿಶ್ಯೂ ಪೇಪರ್ನಿಂದ ಮುಚ್ಚಿಕೊಳ್ಳುವುದು ಮತ್ತು ಬಳಸಿದ ಟಿಶ್ಯೂ ಪೇಪರ್ನ್ನು ಕಸದ ಬುಟ್ಟಿಯಲ್ಲಿ ಹಾಕುವುದು.
* ಅನಾರೋಗ್ಯದ ಜನರಿಂದ ದೂರವಿರುವುದು: ಅನಾರೋಗ್ಯದ ಜನರಿಂದ ದೂರವಿರುವುದು ವೈರಸ್ ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ.
* ಆರೋಗ್ಯಕರ ಆಹಾರ ಸೇವಿಸುವುದು: ಆರೋಗ್ಯಕರ ಆಹಾರ ಸೇವಿಸುವುದು ಮತ್ತು ಸಾಕಷ್ಟು ನೀರು ಕುಡಿಯುವುದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read