ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಳಗಾವಿ, ಖಾನಾಪುರ ತಾಲೂಕುಗಳಲ್ಲಿ ಮಾತ್ರ ಸರ್ಕಾರಿ, ಅನುದಾನ ರಹಿತ, ಅನುದಾನಿತ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ತಾಲೂಕು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ತಹಶೀಲ್ದಾರ್ ಶೈಲೇಶ್ ಪರಮಾನಂದ ಆದೇಶ ಹೊರಡಿಸಿದ್ದಾರೆ.
ಹಾಸನದ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಕಲೇಶಪುರ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಡಿಸಿ ಕೆ.ಎಸ್. ಲತಾಕುಮಾರಿ ರಜೆ ಘೋಷಿಸಿದ್ದಾರೆ.