BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read