BREAKING : ವಿಜಯಪುರದಲ್ಲಿ ಘೋರ ದುರಂತ : ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಂದೆಯನ್ನೇ ಕೊಂದ ಮಗ!

ವಿಜಯಪುರ : ವಿಜಯಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಬುದ್ದಿವಾದ ಹೇಳಿದಕ್ಕೆ ಕೋಪಗೊಂಡು ಮಗನೊಬ್ಬ ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ವಿಜಯಪುರದ ವೆಂಕಟೇಶ್ವರ ನಗರದ ನಿವಾಸಿ ರಮೇಶ ಕೂಡಿಗನೂರು (60) ಎಂಬ ವ್ಯಕ್ತಿಯನ್ನು ಸ್ವಂತ ಮಗನೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪುತ್ರ ಅಮೀತ್ ಕೂಡಿಗನೂರು ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಮಾದಕ ವ್ಯಸನಿಯಾಗಿದ್ದ ಅಮಿತ್ ದುಷ್ಚಟದಿಂದ ದೂರವಿರುವಂತೆ ರಮೇಶ್ ಬುದ್ದಿಮಾತು ಹೇಳಿದ್ದರು. ಇದರಿಂದ ಕೋಪಗೊಂಡ ಮಗ ಅಮಿತ್ ರಾತ್ರಿ ಮಲಗಿದ್ದ ವೇಳೆ ರಮೇಶ್ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read