BREAKING : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ : ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಇಬ್ಬರು ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡ ಗುಬ್ಬಿ ಸಮೀಪದ ಡಿ ಮ್ಯಾಕ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ಭಾನುವಾರ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಕಿ ಕಂಡು ಕೂಡಲೇ ಸ್ಥಳೀಯರು ಅಗ್ನಿ ಶಾಮಕ ದಳ ಹಾಗೂ ಪೊಲೀಸರು ಮಾಹಿತಿ ನೀಡಿದ್ದಾರೆ. ನಂತರ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತರನ್ನು ಕರಿಯಮ್ಮ ಅಗ್ರಹಾರ ನಿವಾಸಿ ಸೌಮಿನಿ ದಾಸ್‌ (21) ಹಾಗೂ ಅಭಿಲ್‌ ಅಬ್ರಾಹಂ (25)  ಎಂದು ಗುರುತಿಸಲಾಗಿದ್ದು,ಸೌಮಿನಿ ದಾಸ ಮೂಲತಹ ಪಶ್ಚಿಮ ಬಂಗಾಳದವರಾಗಿದ್ದು, ಅಬ್ರಾಹಂ ಕೇರಳ ಮೂಲದವನು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read