ಬೆಂಗಳೂರು: ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕ ಬಂದ್ ಗೆ ಕರೆ ಕೊಡಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಸಂಘಟನೆಗಳ ಜೊತೆಗೆ ಮಾತನಾಡಿ ಕರ್ನಾಟಕ ಬಂದ್ ಗೆ ಬೆಂಬಲ ಕೇಳುತ್ತೇವೆ. ಕಮಲ್ ಹಾಸನ್ ಚಿತ್ರ ಬಿಡುಗಡೆಯಾದರೆ ಕರ್ನಾಟಕ ರಣರಂಗ ಆಗುತ್ತದೆ. ಜಿಲ್ಲೆ, ತಾಲೂಕುಗಳಲ್ಲಿ ಹೋರಾಟಗಾರರು ಜೈಲಿಗೆ ಹೋಗಲು ಎಲ್ಲಾ ಹೋರಾಟಗಾರರು ಸಜ್ಜಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಟ ಕಮಲ್ ಹಾಸನ್ ಒಬ್ಬ ಅವಿವೇಕಿ, ಅಯೋಗ್ಯ, ಮೂರ್ಖ ಎಂದು ಟೀಕಿಸಿದ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರ ತುರ್ತಾಗಿ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.