BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘KSDL’ ಅಧಿಕಾರಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

KSDL’  ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಕೈಯಲ್ಲೇ ಡೆತ್ ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿದ್ದಾರೆ.    ಡಿ.28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 2019 ರಲ್ಲಿ 2 ನೇ ಮದುವೆಯಾಗಿದ್ದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಹಾಲಕ್ಷ್ಮೀ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read