BREAKING : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಮಣ್ಣು ಕುಸಿದು ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ.

ಸವಳಂಗ ರಸ್ತೆಯ ರೈಲ್ವೆ ಮೇಲು ಸೇತುವೆಯ ಕಾಮಗಾರಿಯ ವೇಳೆ ಅಂಡರ್ ಗ್ರೌಂಡ್ ಪೈಪ್ ಲೈನ್ ಕೂರಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಒಳಗೆ ಇಳಿದು ಕೆಲಸ ಮಾಡುತ್ತಿದ್ದ ವೇಳೆ ಅಗೆದ ಮಣ್ಣು ಕುಸಿದಿದೆ ಎನ್ನಲಾಗಿದೆ. ಪರಿಣಾಮ ಸತೀಶ್ ತಲೆಗೆ ಗಂಭೀರ ಗಾಯಗಳಾಗಿದೆ.

ರೈಲ್ವೇ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸತೀಶ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಜೆಸಿಬಿ ಮೂಲಕ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read