BREAKING : ಶಿರಾಡಿ ಘಾಟ್ ನಲ್ಲಿ ಭೂಕುಸಿತ ; ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್..!

ಬೆಂಗಳೂರು : ಭಾರಿ ಮಳೆಯಿಂದ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್ ಆಗಿದೆ.

ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ರೈಲುಗಳನ್ನು 15 ದಿನ ಬಂದ್ ಮಾಡಲಾಗಿದ್ದು, ಆಗಸ್ಟ್ 10 ರವರೆಗೆ ಈ ಮಾರ್ಗದಲ್ಲಿ ಯಾವುದೇ ರೈಲು ಸಂಚಾರ ಇರಲ್ಲ ಎಂದು ರೈಲ್ವೇ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಭೂಕುಸಿತ ಉಂಟಾದ ಹಿನ್ನೆಲೆ 14 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಸದ್ಯ 400 ಕ್ಕೂ ಹೆಚ್ಚು ಕಾರ್ಮಿಕರು ಹಳಿ ಮೇಲೆ ಬಿದ್ದ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read