BREAKING : ಬೆಂಗಳೂರು, ಮಂಡ್ಯ ಸೇರಿ ರಾಜ್ಯಾದ್ಯಂತ 25 ಕಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ಬೆಂಗಳೂರು : ಬೆಂಗಳೂರು, ಮಂಡ್ಯ ಸೇರಿ 25 ಕಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಧಿಡೀರ್ ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ, ಹೆಚ್ಚುವರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ 25 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಾವೇರಿ ನಿಗಮದ ಎಂಡಿ ಮಹೇಶ್ ನಿವಾಸ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ಮಂಡ್ಯ ಲೋಕಾಯುಕ್ತ ಎಸ್ ಪಿ ಸುರೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಬೆಂಗಳೂರಿನ ಬನಶಂಕರಿಯಲ್ಲಿರುವ ಅಬಕಾರಿ ಇಲಾಖೆ ಎಸ್. ಪಿ ಮೋಹನ್ ಮನೆ ಮೇಲೂ ದಾಳಿ ನಡೆಸಲಾಗಿದೆ.

ನಾಲ್ವರು ಅಧಿಕಾರಿಗಳ  ನಿವಾಸದ ಮೇಲೆ ರೇಡ್

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ, ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್ ನಿವಾಸ ಹಾಗೂ ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ.

ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read