ಚಿಕ್ಕಬಳ್ಳಾಪುರ: ಬಾರ್ ಬಳಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಗ್ರಾಮದ ಬಾರ್ ಸಮೀಪ ನಡೆದಿದೆ.
ಆಂಧ್ರಪ್ರದೇಶದ ಹಿಂದೂಪುರ ಮೂಲದ ರವಿಚಂದ್ರ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಹಿಂದೂಪುರ ನಿವಾಸಿ ಅಶೋಕನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ರವಿಚಂದ್ರನನ್ನು ಕೊಲೆ ಮಾಡಿ ಆರೋಪಿ ಅಶೋಕ್ ಪರಾರಿಯಾಗಿದ್ದಾನೆ. ಕೊಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.