BREAKING : ಅನೈತಿಕ ಸಂಬಂಧ ಆರೋಪ : ಯಾದಗಿರಿಯಲ್ಲಿ ಉಸಿರುಗಟ್ಟಿಸಿ ವಿವಾಹಿತ ಮಹಿಳೆಯ ಕೊಲೆ

ಯಾದಗಿರಿ : ಉಸಿರುಗಟ್ಟಿಸಿ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿಯ ಕಂಚಗಾರಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಮಹಾದೇವಿ (40 ) ಎಂಬ ಮಹಿಳೆಯನ್ನು ಕೊಲೆ ಮಾಡಲಾಗಿದೆ.

7 ವರ್ಷದ ಹಿಂದೆ ಮಹಾದೇವಿ ಪತಿ ಸಾವನ್ನಪ್ಪಿದ್ದರು. ಮಹಾದೇವಿ 7 ವರ್ಷದಿಂದ ಮಕ್ಕಳ ಜೊತೆ ಜೀವನ ಸಾಗಿಸುತ್ತಿದ್ದರು. ಕೊಲೆಯಾದ ಮಹಾದೇವಿ ಜೊತೆ ಊರಿನ ಕೆಲವರು ಅನೈತಿಕ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಊರಿನ ಇಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read