BREAKING : ಹುತಾತ್ಮ ಯೋಧ, ಕನ್ನಡಿಗ ‘ಕ್ಯಾ.ಪ್ರಾಂಜಲ್’ ಪಂಚಭೂತಗಳಲ್ಲಿ ಲೀನ

ಬೆಂಗಳೂರು : ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌  ಪಂಚಭೂತಗಳಲ್ಲಿ ಲೀನರಾದರು.

ಬೆಂಗಳೂರಿನ ಸೋಮಸುಂದರ ಪಾಳ್ಯದ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾ.ಎಂ.ವಿ ಪ್ರಾಂಜಲ್ ಅಂತಿಮ ಸಂಸ್ಕಾರ ನಡೆಸಲಾಯಿತು. ಪ್ರಾಂಜಲ್ ತಂದೆ ವೆಂಕಟೇಶ್ ಅಂತಿಮ ವಿಧಿ ವಿಧಾನ ನೆರವೇರಿಸಿದರು. ವೀರಮರಣ ಹೊಂದಿದ ಯೋಧನಿಗೆ ಸೈನಿಕರು ಹಾಗೂ ಪೊಲೀಸರು ಗೌರವ ಸಲ್ಲಿಸಿದರು.

ಪ್ರಾಂಜಲ್ ಕುಟುಂಬಸ್ಥರು, ಸೇನಾಧಿಕಾರಿಗಳು ಭಾರತಾಂಬೆಯ ಪುತ್ರನಿಗೆ ಕಣ್ಣೀರ ನಮನ ಸಲ್ಲಿಸಿದರು.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read