BREAKING: 17 ಪ್ರವಾಸಿಗರಿದ್ದ ಮಿನಿ ಬಸ್ ಪಲ್ಟಿ: ಮೂವರು ಗಂಭೀರ

ಚಿಕ್ಕಮಗಳೂರು: ಮಿನಿ ಬಸ್ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಸಿಗೋಡು ಕೆಫೆ ಬಳಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಇದ್ದ ಮಿನಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ದಟ್ಟ ಮಂಜಿನಿಂದಾಗಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಮಿನಿ ಬಸ್ ನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳಗಳನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ ಒಟ್ಟು 17 ಜನ ಪ್ರಯಾಣಿಸುತ್ತಿದ್ದ ಮಾಹಿತಿ ಗೊತ್ತಾಗಿದೆ. ಬೆಂಗಳೂರಿನಿಂದ ಆಗುಂಬೆ ಪ್ರವಾಸಕ್ಕೆ ತೆರಳಿದ್ದಾಗ ಅಪಘಾತ ಸಂಭವಿಸಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read