BREAKING : ಸಚಿವೆ ‘ಲಕ್ಷ್ಮೀ ಹೆಬ್ಬಾಳ್ಕರ್’ ಕಾರು ಅಪಘಾತ ಪ್ರಕರಣ : ಟ್ರಕ್ ಚಾಲಕನ ವಿರುದ್ಧ ಹಿಟ್ & ರನ್ ಕೇಸ್ ದಾಖಲು.!

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಹಿಟ್ & ರನ್ ಕೇಸ್ ದಾಖಲಾಗಿದೆ.

ಟ್ರಕ್ ಚಾಲಕ ತಮ್ಮನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾಯವಾಗಿದೆ ಎಂದು ಕಾರಿನ ಚಾಲಕ ಜಿ ಶಿವಪ್ರಸಾದ್ ಅವರು ದೂರು ನೀಡಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.‘ನಾನು ಸಚಿವರ ಸರ್ಕಾರಿ ಕಾರು ಚಲಾಯಿಸುತ್ತಿದ್ದೆ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದೆವು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಕಂಟೇನರ್ ಟ್ರಕ್ ಹೋಗುತ್ತಿತ್ತು. ಅದರ ಚಾಲಕ ಯಾವುದೇ ಮುನ್ಸೂಚನೆ ಕೊಡದೆ ಎಡಬದಿಗೆ ಬಂದನು. ಕಾರನ್ನು ಎಡಬದಿಗೆ ತೆಗೆದುಕೊಂಡರೂ ಅದರ ಬಲಬದಿಗೆ ಟ್ರಕ್ ತಾಗಿದೆ. ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದೆ’ ಎಂದು FIR ಲ್ಲಿ ಕಾರು ಚಾಲಕ ಆರೋಪಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read