ದಾವಣಗೆರೆ: ಕರ್ತವ್ಯಲೋಪ, ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು ಮಾಡಲಾಗಿದೆ.
ಹೆಚ್.ಎನ್. ಭಜಕ್ಕನವರ್ ಅವರು ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಆಸ್ತಿ ನೋಂದಣಿಗೆ ಅಗತ್ಯವಿರುವ ಡಿಜಿಟಲ್ ಇ-ಖಾತಾ ತಿದ್ದುಪಡಿ ಮಾಡಿ ಸರ್ಕಾರಕ್ಕೆ ಬರಬೇಕಿದ್ದ ನೋಂದಣಿ ಮತ್ತು ಮುದ್ರಾಂತ ಶುಲ್ಕ ವಂಚಿಸಿದ್ದಾರೆ. ಮುಖ್ಯ ಅಧಿಕಾರಿ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದ್ದು, ಆರೋಪ ಸಾಬೀತಾದ ಹಿನ್ನೆಲೆ ಅಮಾನತು ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಎಂ. ಗಂಗಾಧರ ಸ್ವಾಮಿ ಮಾಹಿತಿ ನೀಡಿದ್ದಾರೆ.