BREAKING : ವಿಜಯಪುರದಲ್ಲಿ ‘ಮುಸುಕುಧಾರಿ ಗ್ಯಾಂಗ್’ ನಿಂದ ದುಷ್ಕ್ರತ್ಯ : ದಂಪತಿ ಹತ್ಯೆಗೆ ಯತ್ನಿಸಿ ದರೋಡೆ.!

ವಿಜಯಪುರ : ವಿಜಯಪುರದಲ್ಲಿ ದರೋಡೆ ಗ್ಯಾಂಗ್ ನಿಂದ ಮತ್ತೊಂದು ದುಷ್ಕ್ರತ್ಯ ನಡೆಸಿದ್ದು, ಚೈನಾಪುರ ಲೇಔಟ್ ನಲ್ಲಿ ದರೋಡೆಗೆ ಬಂದಿದ್ದ ಗ್ಯಾಂಗ್ ಮಾಲೀಕನ ಹತ್ಯೆಗೆ ಯತ್ನಿಸಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಮನೆಗೆ ನುಗ್ಗಿದ ಗ್ಯಾಂಗ್ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೆ ಯತ್ನಿಸಿದೆ. ಮನೆ ಮಾಲೀಕ ಸಂತೋಷ್ ಗೆ ಚಾಕು ಇರಿದು ಹತ್ಯೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಸಂತೋಷ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂತೋಷ್ ಪತ್ನಿ ಭಾಗ್ಯಲಕ್ಷ್ಮಿ ಮೇಲೂ ಹಲ್ಲೆ ನಡೆಸಿದ ಗ್ಯಾಂಗ್ ಚಿನ್ನದ ಸರ ಕಿತ್ತು ಪರಾರಿಯಾಗಿದೆ. ಮುಸುಕುಧಾರಿ ಗ್ಯಾಂಗ್ ಈ ಕೃತ್ಯ ಎಸಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read