BREAKING : ಮುಡಾ ಹಗರಣ : ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಲೋಕಾಯುಕ್ತಗೆ ಸ್ನೇಹಮಯಿ ಕೃಷ್ಣ ದೂರು.!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ  ಶಾಸಕ ಜಿ.ಟಿ ದೇವೇಗೌಡ ವಿರುದ್ಧ ದೂರು ದಾಖಲಾಗಿದೆ.

ತಮ್ಮ ಪ್ರಭಾವ ಬಳಸಿ ಜಿ.ಟಿ ದೇವೇಗೌಡ ಅವರು ಅಳಿಯ ಹಾಗೂ ಚೌಡಯ್ಯ ಎಂಬುವವರಿಗೆ 6 ಸೈಟ್ ಕೊಡಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಜಿ.ಟಿ ದೇವೇಗೌಡ ವಿರುದ್ಧ ದೂರು ದಾಖಲಿಸಿದ್ದಾರೆ. ಸರ್ಕಾರಕ್ಕೆ ಸೇರಿದ ಜಮೀನಿನ ಬಗ್ಗೆ ಸುಳ್ಳು ದಾಖಲೆ ಸೃಷ್ಟಿಸಿರುವ ಆರೋಪ ಕೇಳಿಬಂದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಭಾರಿ ಸುದ್ದಿಯಾಗಿತ್ತು, ಈ ಬೆನ್ನಲ್ಲೇ ಜಿ.ಟಿ ದೇವೇಗೌಡ ವಿರುದ್ಧ ಕೂಡ ದೂರು ದಾಖಲಾಗಿದೆ. ಮೈಸೂರಿನಲ್ಲಿ ಲೋಕಾಯುಕ್ತ ಎಸ್ ಪಿ ಗೆ ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ.

 

 

a

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read