BREAKING : ಮುಡಾ ಹಗರಣ : ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭ

ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಗಿದೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಈ ಮೊದಲೇ ನಿಗದಿಯಾಗಿದ್ದಂತೆ ದೂರುದಾರರ ವಾದಕ್ಕೆ ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಉತ್ತರ ನೀಡಲಿದ್ದಾರೆ. ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆಧರಿಸಿ ಸಿಎಂ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆಯಾಗಿದ್ದು, ತೀರ್ಪು ನೀಡುವವರೆಗೆ ಆದೇಶ ಮುಂದುವರೆಯಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read