BREAKING: ದಯಾನಂದ್ ಅಮಾನತು ಹಿನ್ನೆಲೆ ಬ್ಯಾಟನ್ ಇಲ್ಲದೇ ಅಧಿಕಾರ ಸ್ವೀಕರಿಸಿದ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಿದ್ದು, ನೂತನ ಪೊಲೀಸ್ ಆಯುಕ್ತರಾಗಿ ಕರ್ನಾಟಕ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕರಿಸಿದ್ದಾರೆ.

ನೂತನ ಪೊಲೀಸ್ ಆಯುಕ್ತರಿಗೆ ಬ್ಯಾಟನ್ ಹಸ್ತಾಂತರ ಮಾಡಿಲ್ಲ. ದಯಾನಂದ್ ಅಮಾನತು ಹಿನ್ನೆಲೆ ಬ್ಯಾಟನ್ ಹಸ್ತಾಂತರಿಸಿಲ್ಲ. ಕಡತಕ್ಕೆ ಸಹಿ ಹಾಕಿ ನೂತನ ಆಯುಕ್ತರು ಅಧಿಕಾರ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿ ಸೂಚನೆ ಮೇರೆಗೆ ಅಧಿಕಾರ ಸ್ವೀಕರಿಸಿದ್ದೇನೆ ಎಂದು ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿ ಒಳ್ಳೆಯ ಕೆಲಸ ಮಾಡಿದ್ದಾರೆ. ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read