BREAKING NEWS: ಸುದ್ದಿಗೋಷ್ಠಿಯಲ್ಲಿ ಭಾವುಕರಾದ ಸೋಮಣ್ಣ; ಯಾರ ಮುಲಾಜಿನಲ್ಲೂ ನಾನಿಲ್ಲವೆಂದು ಖಡಕ್ ಮಾತು

ವಸತಿ ಸಚಿವ ವಿ. ಸೋಮಣ್ಣ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾದ ಅವರು ತಾವು ರಾಜಕೀಯದಲ್ಲಿ ನಡೆದು ಬಂದ ಹಾದಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೆ ಯಾರ ಮುಲಾಜಿನಲ್ಲೂ ನಾನಿಲ್ಲ ಎಂದು ಖಡಕ್ ಮಾತುಗಳನ್ನು ಆಡಿದ್ದಾರೆ.

ತಾವು ಬಿಜೆಪಿಯನ್ನು ಬಿಡುತ್ತಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದ ಅವರು, ಕೆಲವರು ಸುಮ್ಮನೆ ತೇಜೋವಧೆ ಮಾಡುವ ಸಲುವಾಗಿ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಇದರಿಂದ ಅವರಿಗೆ ಯಾವ ಲಾಭವಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ನಾನು ಪ್ರಾಮಾಣಿಕ ವ್ಯಕ್ತಿ. ಸ್ವಾಭಿಮಾನ ಮಾರಾಟ ಮಾಡಿ ಜೀವನ ಮಾಡುವವನು ನಾನಲ್ಲ ಎಂದು ಹೇಳಿದ ಸೋಮಣ್ಣ, ನಾನು ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದವನು. ಸುಳ್ಳು ಹೇಳಲು ನನಗೆ ಬರುವುದಿಲ್ಲ. ಶಿವಕುಮಾರ ಶ್ರೀಗಳೇ ನನಗೆ ಆದರ್ಶ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read