BREAKING NEWS: ವಾಹನ ಸವಾರರೇ ಗಮನಿಸಿ: ಹುಲಿಕಲ್ ಘಾಟ್ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್(ಹುಲಿಕಲ್ ಘಾಟ್) ರಸ್ತೆಯಲ್ಲಿ ) ಭಾರಿ ವಾಹನ ಸಂಚಾರ ನಿಷೇದಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ.ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ 42.10 ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದೆ, ಪ್ರಸ್ತುತ ಮಣ್ಣು ಕುಸಿತವಾಗಿರುವ ಭಾಗದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯ ಕೈಗೊಂಡಿರುವುದಾಗಿ, ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ(ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಾತ್ಕಾಲಿಕವಾಗಿ ಈ ಕೆಳಕಂಡಂತೆ ಅಧಿಸೂಚನೆ ಹೊರಡಿಸಲು ಕಾರ್ಯಪಾಲಕ ಇಂಜಿನಿಯರ್. ಲೋಕೋಪಯೋಗಿ ಇಲಾಖೆ. ಶಿವಮೊಗ್ಗ ವಿಭಾಗ,ಶಿವಮೊಗ್ಗ ರವರು ಉಲ್ಲೇಖದಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯಂತೆ ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು,ಶಿವಮೊಗ್ಗ ಜಿಲ್ಲೆ ಮತ್ತು ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರ ಉಲ್ಲೇಖ (2) (3) (4) ವರದಿಗಳನ್ವಯ, SH-52 ರ ಬಾಳಬರೆ ಘಾಟ್ ನಲ್ಲಿ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ ಭಾರಿ ವಾಹನಗಳ ಸಂಚಾರ ನಿಷೇದ ಮಾಡಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬಹುದಾಗಿ ವರದಿ ಸಲ್ಲಿಸಿರುತ್ತಾರೆ.

ಸದರಿ ಉಲ್ಲೇಖಗಳನ್ನು ಪರಿಶೀಲಿಸಿ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮೋಟಾ‌ರ್ ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರ್ ವಾಹನಗಳ ನಿಯಮಾವಳಿ 1989 0 0 221(2) (2) (2) & (5) ರನ್ವಯ, SH-52ರ ಬಾಳೆಬರೆ ಘಾಟ್ ನ ಮೂಲಕ ಭಾರಿ ವಾಹನಗಳ ಸಂಚಾರ. ನಿಷೇದ ಮಾಡುವುದು ಅಗತ್ಯವೆಂದು ಮನಗಂಡು ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ. ಈ ಕೆಳಕಂಡ ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ಆದೇಶಿಸಿದೆ.

ಹಾಲಿ ಬಳಕೆಯಲ್ಲಿರುವ ಸಂಚಾರ ಮಾರ್ಗ

ತೀರ್ಥಹಳ್ಳಿ ಕುಂದಾಪುರ ರಾಜ್ಯ ತೀರ್ಥ ಹೆದ್ದಾರಿ-52 ರಸ್ತೆಯ ಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ-ರಾವೆ ಕಾನುಗೋಡು ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ ರಾಹೆ-52)

ಪರ್ಯಾಯ ಮಾರ್ಗ

ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ ಕೊಲ್ಲೂರು -ಕುಂದಾಪುರ ರಸ್ತೆ

ಹಾಲಿ ಮಾರ್ಗ

ನಗರ ಸಿದ್ದಾಪುರ ರಾಜ್ಯತೀರ್ಥ ಹೆದ್ದಾರಿ-278 ರಸ್ತೆ ತೀರ್ಥದಿಂದ ಯಡೂರು ಹುಲಿಕಲ್ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು (ಹಳ್ಳಿ ಯಡೂರು- ಸುಳಗೋಡು-ಮಾಸ್ತಿಕಟ್ಟೆ-ಹುಲಿಕಲ್ ಘಾಟ್- ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ ಸೇರುವ ರಸ್ತೆ)

ಪರ್ಯಾಯ ಮಾರ್ಗ

ತೀರ್ಥಹಳ್ಳಿ ಯಡೂರು- ಮಾಸ್ತಿಕಟ್ಟೆ-| ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ ರಸ್ತೆ

ಹಾಲಿ ಮಾರ್ಗ

ಶಿವಮೊಗ್ಗ/ ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು (ಶಿವಮೊಗ್ಗ-ಸಾಗರ ಕಡೆಯಿಂದ ಹೊಸನಗರ- ನಗರ- ಮಾಸ್ತಿಕಟ್ಟೆ- ಹುಲಿಕಲ್ ಘಾಟ್- ಹೊಸಂಗಡಿ- ಸಿದ್ದಾಪುರ- ಮೂಲಕ ಕುಂದಾಪುರ ಸೇರುವ ರಸ್ತೆ)

ಪರ್ಯಾಯ ಮಾರ್ಗ

ಶಿವಮೊಗ್ಗ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ಅನಂತರ ಹೊನ್ನಾವರ ದಿಂದ-ಭಟ್ಕಳ-ಬೈಂದೂರು-ಕುಂದಾಪುರ ರಸ್ತೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read