ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.
ಶೃಂಗೇರಿ ತಾಲೂಕಿನ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದೆ. ಬಿಜೆಪಿ ಮುಖಂಡ ಹರೀಶ್(47), ಉಮೇಶ್(44) ಮೃತಪಟ್ಟವರು ಎಂದು ಹೇಳಲಾಗಿದೆ. ಸೊಪ್ಪು ತರಲು ಮನೆಯ ಹಿಂಭಾಗ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ. ಕೆರೆಕಟ್ಟೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೆರೆಗದ್ದೆಯ ಸಮೀಪ ಸೊಪ್ಪು ತರಲು ಹೋದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಹರೀಶ್, ಉಮೇಶ್ ಮೃತಪಟ್ಟಿದ್ದು, ಮೃತದೇಹಗಳ ಬಳಿಯೇ ಕಾಡಾನೆ ಇರುವುದರಿಂದ ಶವಗಳನ್ನು ಸಾಗಿಸಲು ತೊಂದರೆಯಾಗಿದೆ. ಮೃತದೇಹಗಳನ್ನು ಶೃಂಗೇರಿ ಆಸ್ಪತ್ರೆಗೆ ಸಾಗಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಲ್ಲಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಟ್ ವರ್ಕ್ ಸಿಗದ ಈ ಪ್ರದೇಶದಲ್ಲಿ ಕಾಡಾನೆ ಸಂಚರಿಸುತ್ತಿದ್ದು, ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಅರಣ್ಯ ಸಚಿವರು ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದ್ದಾರೆ.

 
			 
		 
		 
		 
		 Loading ...
 Loading ... 
		 
		