BREAKING : ಹಳೇ ವೈಷಮ್ಯ : ಮಂಗಳೂರಿನಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ

ಮಂಗಳೂರು : ಹಳೇ ವೈಷಮ್ಯದ ಹಿನ್ನೆಲೆ ಚಾಕು ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಳ್ಳಾಲದ ಸಾರಸ್ವತ ಕಾಲೋನಿಯಲ್ಲಿ ನಡೆದಿದೆ.

ಮೃತನನ್ನು 28 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊಂದಿದ್ದಾರೆ . ಸೂರಜ್ ಎಂಬಾತ ಹಾಗೂ ಇನ್ನಿಬ್ಬರ ಗುಂಪು ವರುಣ್ ನನ್ನು ಕೊಲೆ ಮಾಡಿದ್ದು, ಹಳೇ ವೈಷಮ್ಯದ ಹಿನ್ನೆಲೆ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನ ಮಾಡಿ ಗಲಾಟೆ ತೆಗೆದ ಗ್ಯಾಂಗ್ ಯುವಕನನ್ನು ಅಮಾನುಷವಾಗಿ ಹತ್ಯೆ ಮಾಡಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read