BREAKING : ಹೃದಯಾಘಾತದಿಂದ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ.!

ಬಾಗಲಕೋಟೆ :  ಹೃದಯಾಘಾತದಿಂದ  ಓಲೆಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ (65) ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಶುಗರ್ , ಬಿಪಿ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು ನಿನ್ನೆ ರಾತ್ರಿ ಓಲೆಮಠದ ಶಾಖಾ ಮಠದಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಇಂದು ಗೊರವಿನಕೊಳ್ಳದಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ನಂತರ ಬಾಗಲಕೋಟೆ ಜಿಲ್ಲೆಯ ಜಮಖಂಡಿಗೆ ಪಾರ್ಥಿವ ಶರೀರ ರವಾನೆ ಆಗಲಿದೆ. ಇಂದು ಸಂಜೆ 7 ಗಂಟೆಗೆ ಲಿಂಗಾಯತ ವಿಧಿ ವಿಧಾನಗಳ ಮೂಲಕ ಶ್ರೀಗಳ ಅಂತ್ಯಸಂಸ್ಕಾರ ಕಾರ್ಯ ನಡೆಯಲಿದೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read