BREAKING : ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ನಾಳೆಯೇ ‘ಸುಗ್ರೀವಾಜ್ಞೆ’ ಜಾರಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ನಾಳೆಯೇ ಸುಗ್ರೀವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ಸುಗ್ರೀವಾಜ್ಞೆ ಜಾರಿ ಮಾಡಲಿದ್ದೇವೆ ಎಂದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್ ನಿಂದ ಕಿರುಕುಳ ಆದರೆ ತಕ್ಷಣ ಪೊಲೀಸರಿಗೆ ದೂರು ನೀಡಬೇಕು ಆಗ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಪೊಲೀಸರಿಗೆ ಸುಮೋಟೋ ಕೇಸ್ ದಾಖಲಿಸಲು ಸೂಚನೆ ನೀಡಿದ್ದೇನೆ ಎಂದರು.

ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವರು ಬಲಿಯಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ಈ ಘಟನೆ ನಡೆದಿದೆ. ಪ್ರೇಮಾ (50) ಮೃತ ಮಹಿಳೆ. ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಾಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಪ್ರೇಮಾ ಸಾವನ್ನಪ್ಪಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read