BREAKING : ಬೆಂಗಳೂರಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ : ‘RTO’ ಅಧಿಕಾರಿಗಳಿಂದ 15 ಆಟೋ ಸೀಜ್.!

ಬೆಂಗಳೂರು : ಬೆಂಗಳೂರಿನಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದ ಹಿನ್ನೆಲೆ ಆರ್ ಟಿ ಒ ಅಧಿಕಾರಿಗಳು 15 ಆಟೋ ಸೀಜ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಆರ್ ಟಿ ಒ ಅಧಿಕಾರಿಗಳು ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ. ಆಟೋ ಚಾಲಕರು ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.

ಆಟೋ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈಗ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದು, ಒಂದು ವೇಳೆ ದರ ಪರಿಷ್ಕರಣೆ ಮಾಡಿದಲ್ಲಿ ಮಿನಿಮಮ್ ಚಾರ್ಜ್ 36 ರೂ. ಆಗಲಿದೆ. ಆನಂತರ ಪ್ರತಿ ಕಿಲೋಮಿಟರ್ ದರ 18 ರೂ.ನಷ್ಟು ಹೆಚ್ಚಳವಾಗಲಿದೆ. ಪ್ರಸ್ತುತ ಮಿನಿಮಮ್ ಚಾರ್ಜ್ 30 ರೂಪಾಯಿ ಇದ್ದು, ನಂತರದ ಪ್ರತಿ ಕಿಲೋ ಮೀಟರ್ ಗೆ 15 ರೂಪಾಯಿ ದರ ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read