ದಾವಣಗೆರೆ: ದಾವಣಗೆರೆ ನಗರದ ಮಟ್ಟಿಕಲ್ಲು ಪ್ರದೇಶದಲ್ಲಿ ಗುರುವಾರ ರಾತ್ರಿ ಗಣೇಶೋತ್ಸವ ಅಂಗವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವಿಗೆ ಪೊಲೀಸರು ಮುಂದಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮಟ್ಟಿಕಲ್ಲು ಪ್ರದೇಶದಲ್ಲಿ ವೀರ ಸಾವರ್ಕರ್ ಯುವಕರ ಸಂಘದಿಂದ ಪ್ರತಿವರ್ಷದಂತೆ ಅದ್ದೂರಿಯಾಗಿ ಗಣೇಶೋತ್ಸವ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಛತ್ರಪತಿ ಶಿವಾಜಿ ಮಹಾರಾಜರು ವ್ಯಾಘ್ರ ನಖದಿಂದ ಅಫ್ಜಲ್ ಖಾನ್ ನನ್ನು ಹತ್ಯೆ ಮಾಡುವ ಫ್ಲೆಕ್ಸ್ ಅಳವಡಿಸಲಾಗಿತ್ತು.
ದಾವಣಗೆರೆ ಪೊಲೀಸರು ಇದನ್ನು ತೆರವುಗೊಳಿಸಲು ಮುಂದಾದ ಸಂದರ್ಭದಲ್ಲಿ ಸ್ಥಳೀಯ ಹಿಂದೂಪರ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲವು ಹೊತ್ತು ಬಿಗುವಿನ ಪರಿಸ್ಥಿತಿ ಉಂಟಾಗಿತ್ತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಅಂತಿಮವಾಗಿ ಶುಕ್ರವಾರ ಬೆಳಗ್ಗೆ ಕ್ರಮ ಕೈಗೊಳ್ಳುವುದಾಗಿ ಹಿಂದು ಸಂಘಟನೆ ಮುಖಂಡರು ತಿಳಿಸಿದ್ದಾರೆ.