BREAKING: ಸರ್ಕಾರವೇ ದೊಡ್ಡ ದುರಂತಕ್ಕೆ ಕಾರಣವಾಗಿದ್ದರೂ ಜನರ ಆಕ್ರೋಶ ತಣ್ಣಗಾಗಿಸಲು ಪೊಲೀಸ್ ಅಧಿಕಾರಿಗಳು ಬಲಿಪಶು: ಯಡಿಯೂರಪ್ಪ

ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ತಲೆತಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ ಹೊತ್ತು, ಆರ್.ಸಿ.ಬಿ ವಿಜಯೋತ್ಸವದ ಆಚರಣೆಗೆ ಮುಂದಾಗಿ, ಇಂತಹ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ, ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸಿ, ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ ಎಂದು ಟೀಕಿಸಿದ್ದಾರೆ.

ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕುರ್ಚಿಗೆ ಅಂಟಿ ಕೂರುವ ಸ್ವಾರ್ಥದ ಕ್ರಮವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹಮಂತ್ರಿ ಡಾ.ಜಿ. ಪರಮೇಶ್ವರ  ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read