ಕಾರವಾರ: ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದ್ದು, ಕೋಲ್ಕತ್ತಾ ಮೂಲದ ಓರ್ವ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ನಾಯ್ಕ್ ರೆಸಿಡೆನ್ಸಿ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ. ಸಿಪಿಐ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ರೆಸಿಡೆನ್ಸಿ ಮಾಲಿಕ ವಿನಾಯಕ ನಾಯಕ, ಸಿದ್ದಾಪುರದ ಗಣೇಶ ನಾಯ್ಕ, ಆಕಾಶ್ ಮತ್ತು ಅನಿಲ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. 4630 ನಗದು, ಎರಡು ಮೊಬೈಲ್, ನಿರೋಧ್ ಪ್ಯಾಕೆಟ್, ಒಂದು ಬೈಕ್ ಜಪ್ತಿ ಮಾಡಲಾಗಿದೆ. ಮುರ್ಡೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.