BREAKING : ಸಂಸದ ಪ್ರತಾಪ್ ಸಿಂಹ ವಿರುದ್ಧ ‘ದೇಶದ್ರೋಹಿ’ ಫ್ಲೆಕ್ಸ್ : ಸಂಘಟನೆ ಅಧ್ಯಕ್ಷನ ವಿರುದ್ಧ ‘FIR’ ದಾಖಲು

ಮೈಸೂರು : ಸಂಸದ ‘ಪ್ರತಾಪ್ ಸಿಂಹ’ ದೇಶದ್ರೋಹಿ ಎಂದು ಮೈಸೂರಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಕೆ ಮಾಡಿದ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ ಕೈಗೆ ಬಾಂಬ್ ಕೊಟ್ಟು, ದೇಶದ್ರೋಹಿ ಎಂಬ ಫ್ಲೆಕ್ಸ್ ಅನ್ನು ಅಳವಡಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಕೆ ಎಸ್ ಶಿವರಾಮ್ ವಿರುದ್ಧ ದೂರು ದಾಖಲು ಮಾಡಲಾಗಿದೆ. ಬಿಜೆಪಿ ಮುಖಂಡ ಬಿ. ಆನಂದ್ ಎಂಬುವವರು ಈ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಂಸತ್ ಭವನಕ್ಕೆ ನುಗ್ಗಲು ದುಷ್ಕರ್ಮಿಗಳಿಗೆ ಪ್ರತಾಪ್ ಸಿಂಹ ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಹಿಂದುಳಿದ ಜಾಗೃತ ವೇದಿಕೆಯ ಸದಸ್ಯರು ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದರು, ಸಂಸದ ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆದಿದ್ದರು ಹಾಗೂ ಫ್ಲೆಕ್ಸ್ ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ಫೋಟೋ ಹಾಕಲಾಗಿತ್ತು. ಕೂಡಲೇ ವಿಷಯ ತಿಳಿದ ಪಾಲಿಕೆ ಸಿಬ್ಬಂದಿಗಳು ಫ್ಲೆಕ್ಸ್ ತೆರವುಗೊಳಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read