BREAKING : ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ ಲೋಕಾರ್ಪಣೆಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.!

ಬೆಳಗಾವಿ : ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ ಲೋಕಾರ್ಪಣೆಗೊಳಿಸಿದ್ದಾರೆ.ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯು ಅತ್ಯಾಧುನಿಕ ಸೌಲಭ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಿದೆ. ಆ ಆಸ್ಪತ್ರೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಾರ್ಪಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕೆಎಲ್ ಇ ಸಂಸ್ಥೆಯಿಂದ ನಿರ್ಮಿಸಲಾದ ಕ್ಯಾನ್ಸರ್ ಆಸ್ಪತ್ರೆಯನ್ನು ಅವರು ಇಂದು ಉದ್ಘಾಟಿಸಿದ್ದಾರೆ.

ಮೊದಲು ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಿಎಂ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತ ಕೋರಿದ್ದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅಲ್ಲಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದರು.

ಇದಕ್ಕೂ ಮುನ್ನ  ಬೆಂಗಳೂರಿನಲ್ಲಿ ನಡೆದ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವದ ಸ್ಮರಣಾರ್ಥ ಅಧ್ಯಕ್ಷ ದ್ರೌಪದಿ ಮುರ್ಮು ಅಧ್ಯಕ್ಷತೆ ವಹಿಸಿದ್ದರು. ಅಸಾಧಾರಣ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read