BREAKING : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ. ಸೋಮಶೇಖರ್ : ಕಾಂಗ್ರೆಸ್‌ ಪರ ಮತ!

ಬೆಂಗಳೂರು : ಇಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬಿಜೆಪಿಗೆ ಶಾಸಕ ಎಸ್.ಟಿ. ಸೋಮಶೇಖರ್‌ ಶಾಕ್‌ ಕೊಟ್ಟಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ ಅಡ್ಡಮತದಾನ ಮಾಡಿದ್ದು, ಕಾಂಗ್ರೆಸ್‌ ಪರ ಚಲಾಯಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಮತದಾನಕ್ಕೂ ಮುನ್ನ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್‌, ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ವೋಟ್. ಕಳೆದ 6 ವರ್ಷಗಳಿಂದ ಇದೆಲ್ಲವನ್ನೂ ನೋಡುತ್ತಿದ್ದೇನೆ. ಎಲ್ಲರೂ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಹೊರತು ಯಾರೊಬ್ಬರೂ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ. ಹಾಗಾಗಿ ಈ ಬಾರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರೇ ಆಗಲಿ ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ಕೊಡುತ್ತಾರೋ ಅವರಿಗೆ ನನ್ನ ವೋಟ್ ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read