BREAKING: ನಡುರಸ್ತೆಯಲ್ಲೇ ಗುತ್ತಿಗೆದಾರನ ಬರ್ಬರ ಹತ್ಯೆಗೈದ ಕೊಲೆ ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರ ಆಕ್ರೋಶ

ಹಾವೇರಿ: ಹಾವೇರಿಯಲ್ಲಿ ಗುತ್ತಿಗೆದಾರ ಶಿವಾನಂದ ಕುನ್ನೂರು(40) ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಾಗರಾಜ್ ಸವದತ್ತಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆಯಾದ ಶಿವಾನಂದ ಕುಟುಂಬದವರು ಆರೋಪಿ ಮನೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಶಿಗ್ಗಾಂವಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಇರುವ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಾವು ನೋವು ಆಗಿಲ್ಲ.

ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು ಅವರನ್ನು ಐದು ಜನರ ತಂಡ ಕೊಚ್ಚಿ ಕೊಲೆ ಮಾಡಿತ್ತು. ನಡು ರಸ್ತೆಯಲ್ಲಿಯೇ ಕೊಲೆ ಮಾಡಲಾಗಿದ್ದು, ನಾಗರಾಜ್ ಸವದತ್ತಿ, ಹನುಮಂತ, ಆಶ್ರಫ್, ಸುದೀಪ್, ಸುರೇಶ್ ಕೃತ್ಯವೆಸಗಿದ ಆರೋಪಿಗಳಾಗಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಗಂಗೆಬಾವಿ ಕ್ರಾಸ್ ಬಳಿ ಕೊಲೆ ಮಾಡಿದ್ದರು. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read