ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.
ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ಭಾರತೀ ನಗರ, ಹಲಸೂರು, ಶಿವಾಜಿನಗರ, ಹೆಣ್ಣೂರು, ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ. ಡಿಸಿಪಿ ದೇವರಾಜ್ ನಿರ್ದೇಶನದಲ್ಲಿ ದಾಳಿ ನಡೆಸಲಾಗಿದ್ದು, ಹಲಸೂರು ರೌಡಿಶೀಟರ್ ಅಪೋಯ್, ಪ್ರಭು ಅವರನ್ನು ವಶಕ್ಕೆ ಪಡೆಯಲಾಗಿದೆ.